TSK

TSK · ಮತ್ತಾಯನು 13:16

Treasury of Scripture Knowledge references in ಕನ್ನಡ IRV.

Back to passage

‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›

“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.

ಯೇಸು ಆತನಿಗೆ, ‹“ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ,›‹ನೋಡದೆ ನಂಬಿದವರು ಧನ್ಯರು”› ಎಂದು ಹೇಳಿದನು.

ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.