TSK

TSK · ಮತ್ತಾಯನು 16:21

Treasury of Scripture Knowledge references in ಕನ್ನಡ IRV.

Back to passage

¶ ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು.

¶ ‹“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ”› ಅಂದನು.

¶ ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, ‹“ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.›

‹ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು”› ಎಂದು ಹೇಳಿದನು.

¶ ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.

“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;

ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, ‹“ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು”› ಹೇಳಿದನು.

ಯೇಸು ಅವರಿಗೆ, ‹“ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ”› ಎಂದು ಹೇಳಿದನು.

¶ ‹“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು”› ಎಂದು ಹೇಳಿದನು.

¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, ‹“ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.›

‹ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ”› ಎಂದು ಹೇಳಿದನು.

ಅದಕ್ಕೆ ಯೇಸು ‹“ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು”› ಎಂದು ಉತ್ತರಕೊಟ್ಟನು.

ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;