TSK

TSK · ಮತ್ತಾಯನು 21:39

Treasury of Scripture Knowledge references in ಕನ್ನಡ IRV.

Back to passage

¶ ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.

ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, ‹“ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?›

ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.

ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.

ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?

ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.

ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.