TSK

TSK · ಮತ್ತಾಯನು 21:5

Treasury of Scripture Knowledge references in ಕನ್ನಡ IRV.

Back to passage

ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

¶ ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.

ಇವನಿಗೆ ನಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿಮಾಡುವುದಕ್ಕೋಸ್ಕರ ಎಪ್ಪತ್ತು ಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲರನ್ನು ಎಂಟು ವರ್ಷಗಳ ಕಾಲ ಪಾಲಿಸಿದ ನಂತರ ಮರಣಹೊಂದಿದನು;

ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.

“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.

ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.

¶ “ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.

ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು. ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತರ, ಮೂಲಕವಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು” ಅಂದನು.

¶ ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.

¶ ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.

“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.

‹ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.›

ಆ ಶಿಷ್ಯರು ಹೋಗಿ ಬೀದಿಯಲ್ಲಿ ಹೊರಗೆ ಬಾಗಿಲಿನ ಹತ್ತಿರ ಕತ್ತೆಮರಿಯನ್ನು ಕಟ್ಟಿರುವುದನ್ನು ಕಂಡು ಅದನ್ನು ಬಿಚ್ಚಿದರು.

ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.

ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.