TSK

TSK · ಮತ್ತಾಯನು 27:31

Treasury of Scripture Knowledge references in ಕನ್ನಡ IRV.

Back to passage

ತರುವಾಯ ಯೆಹೋವನು ಮೋಶೆಗೆ, “ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು” ಎಂದು ಆಜ್ಞಾಪಿಸಿದನು.

ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.

‹ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು›‹ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು”› ಎಂದು ಹೇಳಿದನು.

ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕೆ ಅವರ ವಶಕ್ಕೆ ಒಪ್ಪಿಸಿ ಕೊಟ್ಟನು. ಅವರು ಯೇಸುವನ್ನು ತೆಗೆದುಕೊಂಡು ಹೋದರು.

ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.