TSK

TSK · ಅರಣ್ಯಕಾಂಡ 11:4

Treasury of Scripture Knowledge references in ಕನ್ನಡ IRV.

Back to passage

ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.

¶ ಇಸ್ರಾಯೇಲ್ ಸ್ತ್ರೀಯಲ್ಲಿ ಐಗುಪ್ತ ಪುರುಷನಿಂದ ಹುಟ್ಟಿದವನೊಬ್ಬನು ಇಸ್ರಾಯೇಲರ ಪಾಳೆಯದಲ್ಲಿ, ಇಸ್ರಾಯೇಲನಾದ ಒಬ್ಬ ಮನುಷ್ಯನ ಸಂಗಡ ಜಗಳವಾಡುತ್ತಾ ಬಂದನು.

¶ ಆಗ ಜನಸಮೂಹದವರೆಲ್ಲರೂ ತಮ್ಮ ಸ್ವರ ಎತ್ತಿ ಆ ರಾತ್ರಿಯೆಲ್ಲಾ ಗೋಳಾಡಿದರು.

ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.

ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.

ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.