TSK

TSK · ಅರಣ್ಯಕಾಂಡ 14:18

Treasury of Scripture Knowledge references in ಕನ್ನಡ IRV.

Back to passage

¶ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

‘ದೇವರು ದುಷ್ಟನ ಪಾಪ ಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ’ ಎನ್ನುತ್ತೀರೋ, ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೆ ಕೊಟ್ಟುಬಿಡಲಿ.

ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.

¶ ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.

ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.

ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.