TSK

TSK · ಅರಣ್ಯಕಾಂಡ 16:13

Treasury of Scripture Knowledge references in ಕನ್ನಡ IRV.

Back to passage

¶ ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.

¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

¶ ಅಲ್ಲಿ ಜನರು ಬಾಯಾರಿಕೆಯಿಂದ, ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿ, “ನೀನು ನಮ್ಮನ್ನೂ, ನಮ್ಮ ಮಕ್ಕಳನ್ನೂ, ದನಗಳನ್ನೂ ಐಗುಪ್ತ ದೇಶದಿಂದ ಇಲ್ಲಿಗೆ ಕರೆದುತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ?” ಎಂದರು.

ಆದರೆ ನೀವು ಪೂರ್ತಿಯಾಗಿ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ವಾಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು, ‘ನಾವು ಏಕೆ ಐಗುಪ್ತ ದೇಶವನ್ನು ಬಿಟ್ಟುಬಂದೆವು ಎಂದು ಹೇಳುತ್ತೀರಲ್ಲಾ’ ಎಂದು ಹೇಳು” ಎಂದನು.

ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು

ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,

ಹೀಗೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಉಂಟುಮಾಡುತ್ತಾನೆಂಬುದು ತನ್ನ ಸಹೋದರರಿಗೆ ತಿಳಿದುಬರುವುದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳಿದುಕೊಳ್ಳಲಿಲ್ಲ.