ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
TSK
TSK · ಅರಣ್ಯಕಾಂಡ 17:13
Treasury of Scripture Knowledge references in ಕನ್ನಡ IRV.
ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.
ಅವನು ಇಸ್ರಾಯೇಲನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಪ್ರವೇಶಿಸಿ ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲನನ್ನೂ ಮತ್ತು ಆ ಸ್ತ್ರೀಯನ್ನೂ ಒಂದೇ ಬಾರಿಗೆ ಹೊಟ್ಟೆಯನ್ನು ತಿವಿದು ಕೊಂದುಹಾಕಿದನು. ಆಗ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತು ಹೋಯಿತು.
¶ ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.
ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.
ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ.
ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,
ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?
ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.
ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.