TSK

TSK · ಅರಣ್ಯಕಾಂಡ 18:4

Treasury of Scripture Knowledge references in ಕನ್ನಡ IRV.

Back to passage

ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನು ಮತ್ತು ಅವನ ಮಕ್ಕಳನ್ನು ನೇಮಿಸಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದು ಹೇಳಿದನು.

ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.

ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.