TSK

TSK · ಅರಣ್ಯಕಾಂಡ 21:28

Treasury of Scripture Knowledge references in ಕನ್ನಡ IRV.

Back to passage

ಆರ್ ಪಟ್ಟಣದ ತನಕ ಮೋವಾಬಿನ ಮೇರೆಯಾಗಿರುವ ಕೊರಕಲನ್ನೂ ದಾಟಿದ್ದಾಯಿತು” ಎಂದು ಬರೆದದೆ.

ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.

ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.

ಆದಕಾರಣ ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕೊಬ್ಬಿದ ಪ್ರಜೆಗಳಿಗೆ ಕ್ಷಯವನ್ನು ಉಂಟುಮಾಡುವನು. ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಅಸ್ತಿವಾರಕ್ಕೆ ಹತ್ತಿಕೊಳ್ಳುವುದು.

ಪಲಾಯನವಾದವರು ಬಲಗುಂದಿದವರಾಗಿ ಹೆಷ್ಬೋನಿನ ನೆರಳಿನಲ್ಲಿ ನಿಂತಿದ್ದಾರೆ; ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಹೆಷ್ಬೋನಿನಿಂದಲೂ ಅಗ್ನಿಜ್ವಾಲೆ ಹೊರಟು ಮೋವಾಬಿನ ಹಣೆಯನ್ನೂ, ಯುದ್ಧವೀರರ ನೆತ್ತಿಯನ್ನೂ ನುಂಗಿಬಿಟ್ಟಿದೆ.

ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.

ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”

ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ, ಮೋವಾಬು ಸಾಯುವುದು;