ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.
TSK
TSK · ಅರಣ್ಯಕಾಂಡ 27:21
Treasury of Scripture Knowledge references in ಕನ್ನಡ IRV.
ಯೆಹೋವನು ಅವರ ಮುಂದಾಗಿ ಹೋಗಲಿ ಅಥವಾ ಅವರನ್ನು ಮುನ್ನಡೆಸಲು, ಮುಂದಾಗಿ ಬರಲಿ ಅವರನ್ನು ಹಿಂದಕ್ಕೆ ಕರೆದುಕೊಂಡು ಬರಲು, ಒಬ್ಬ ನಾಯಕನನ್ನು ನೇಮಿಸು ನಿನ್ನವರಾದ ಈ ಜನ ಸಮೂಹವು ಕುರುಬನಿಲ್ಲದ ಕುರಿಗಳಂತೆ ಆಗಬಾರದು” ಎಂದು ಬೇಡಿದನು.
¶ ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.
¶ ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು
¶ ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.
ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ
ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.
ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.
ಊರೀಮ್ ಮತ್ತು ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ದೇಶಾಧಿಪತಿಯು ಆಜ್ಞಾಪಿಸಿದನು.