¶ ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,
TSK
TSK · ಙ್ಞಾನೋಕ್ತಿಗಳು 1:8
Treasury of Scripture Knowledge references in ಕನ್ನಡ IRV.
“ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.
ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.
ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.
ಕಂದಾ, ನನ್ನ ಮಾತುಗಳನ್ನು ಮನಸ್ಸಿನಲ್ಲಿಟ್ಟುಕೋ, ನನ್ನ ಆಜ್ಞೆಗಳನ್ನು ನಿಧಿಯಂತೆ ಕಾಪಾಡಿಕೋ.
ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
¶ ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, ‹“ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ”› ಎಂದು ಹೇಳಿದನು.
ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.