TSK

TSK · ಙ್ಞಾನೋಕ್ತಿಗಳು 11:24

Treasury of Scripture Knowledge references in ಕನ್ನಡ IRV.

Back to passage

ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.

ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.

¶ ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.

ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”

ಆ ಕಾಲದಲ್ಲೆಲ್ಲಾ ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೇ; ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆಯುತ್ತಿತ್ತು.

‹ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು”› ಅಂದನು.

ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.