ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.
TSK
TSK · ಙ್ಞಾನೋಕ್ತಿಗಳು 12:11
Treasury of Scripture Knowledge references in ಕನ್ನಡ IRV.
ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.
ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.
ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
“ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,
ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು.
“ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.
¶ ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.