ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
TSK
TSK · ಙ್ಞಾನೋಕ್ತಿಗಳು 13:20
Treasury of Scripture Knowledge references in ಕನ್ನಡ IRV.
ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.
ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.
ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ, ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ,
ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.
ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.