ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.
TSK
TSK · ಙ್ಞಾನೋಕ್ತಿಗಳು 14:32
Treasury of Scripture Knowledge references in ಕನ್ನಡ IRV.
ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವುದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.
ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
‹ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು›‹ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ”› ಎಂದು ಹೇಳಿದನು.
“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”
ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.