ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
TSK
TSK · ಙ್ಞಾನೋಕ್ತಿಗಳು 19:17
Treasury of Scripture Knowledge references in ಕನ್ನಡ IRV.
ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!
ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
ಬಡವರಿಗೆ ದಾನಮಾಡುವವನು ಕೊರತೆಪಡನು, ಅವರನ್ನು ಕಂಡು ಕಾಣದಂತೆ ಇರುವವನು ಬಹುಶಾಪಕ್ಕೆ ಒಳಗಾಗುವನು.
ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›
¶ ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.