ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.
TSK
TSK · ಙ್ಞಾನೋಕ್ತಿಗಳು 2:13
Treasury of Scripture Knowledge references in ಕನ್ನಡ IRV.
ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.
ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು.
ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು, “ನೀತಿವಂತನು ದ್ರೋಹಮಾಡಿದ್ದಲ್ಲಿ ಅವನ ನೀತಿಯು ಅವನನ್ನು ಉದ್ಧರಿಸುವುದಿಲ್ಲ; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ, ಅವನ ಪಾಪವು ಅವನನ್ನು ಬೀಳಿಸುವುದಿಲ್ಲ; ನೀತಿವಂತನು ಪಾಪಮಾಡಿದಲ್ಲಿ ಅವನ ನೀತಿಯು ಅವನನ್ನು ಬದುಕಿಸುವುದಿಲ್ಲ.
¶ ‹“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ.›
ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,
ಆಗ ಯೇಸು ಅವರಿಗೆ, ‹“ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.›
ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,
ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.