ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.
TSK
TSK · ಙ್ಞಾನೋಕ್ತಿಗಳು 21:1
Treasury of Scripture Knowledge references in ಕನ್ನಡ IRV.
¶ ಪರ್ಷಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪರ್ಷಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದನು.
ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.
ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.
ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.
ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ, ಅವರು ಆತನ ಜನರನ್ನು ದ್ವೇಷಿಸಿ, ಆತನ ಸೇವಕರನ್ನು ಕುಯುಕ್ತಿಯಿಂದ ನಡೆಸಿದರು.
ಸಮುದ್ರವು ಕಂಡು ಓಡಿಹೋಯಿತು; ಯೊರ್ದನ್ ಹೊಳೆಯು ಹಿಂದಿರುಗಿತು.
ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?
ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.
ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
¶ ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.