TSK

TSK · ಙ್ಞಾನೋಕ್ತಿಗಳು 21:12

Treasury of Scripture Knowledge references in ಕನ್ನಡ IRV.

Back to passage

¶ ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.

ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.

‘ಪ್ರಧಾನನ ಮನೆ ಏನಾಯಿತು? ದುಷ್ಟರು ವಾಸಿಸಿದ ಗುಡಾರವೆಲ್ಲಿ?’ ಎನ್ನುತ್ತೀರಷ್ಟೆ.

ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.

ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.

ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.

“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಆದರೂ ಅವರಲ್ಲಿ ಬಹು ಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಸಂಹರಿಸಲ್ಪಟ್ಟರು ಮತ್ತು ಅವರ ಶವಗಳು ಅಡವಿಯಲ್ಲೆಲ್ಲ ಬಿದ್ದವು.

ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.