TSK

TSK · ಙ್ಞಾನೋಕ್ತಿಗಳು 21:29

Treasury of Scripture Knowledge references in ಕನ್ನಡ IRV.

Back to passage

ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು!

ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.

ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.

ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.

ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯುವುದಿಲ್ಲ, ಖಂಡಿತವಾಗಿ ಜೀವಿಸುವನು.

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.

¶ “ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.

ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು, ನಾವು ನಿಮ್ಮ ಬಳಿಗೆ ಬರುವುದಕ್ಕೆ ಮಾರ್ಗವನ್ನು ಸರಾಗಮಾಡಿಕೊಡಲಿ.