TSK

TSK · ಙ್ಞಾನೋಕ್ತಿಗಳು 22:12

Treasury of Scripture Knowledge references in ಕನ್ನಡ IRV.

Back to passage

ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು.

ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು.

ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.

ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.

ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.

ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”