TSK

TSK · ಙ್ಞಾನೋಕ್ತಿಗಳು 23:4

Treasury of Scripture Knowledge references in ಕನ್ನಡ IRV.

Back to passage

ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.

ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?

¶ ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು.

“ಈ ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುದು; ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಸಿವುಡಿನಂತೆ ಇರುವವು, ಯೆಹೋವನ ಈ ಮಾತನ್ನು ಸಾರು” ಎಂದು ನನಗೆ ಅಪ್ಪಣೆಯಾಯಿತು.

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.

ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.