TSK

TSK · ಙ್ಞಾನೋಕ್ತಿಗಳು 25:12

Treasury of Scripture Knowledge references in ಕನ್ನಡ IRV.

Back to passage

ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.

ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.

ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು. ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.

ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.