TSK

TSK · ಙ್ಞಾನೋಕ್ತಿಗಳು 27:18

Treasury of Scripture Knowledge references in ಕನ್ನಡ IRV.

Back to passage

ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರಿಯ ಸೇವಕನಿಗೆ ಅಬ್ರಹಾಮನು, “ನೀನು ನನ್ನ ತೊಡೆಯ ಕೆಳಗೆ ಕೈಯಿಡು ಅಂದನು.

ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಒಪ್ಪಿಸಿ ಅವನನ್ನು ಮೇಲ್ವಿಚಾರಕನನ್ನಾಗಿ ಮಾಡಿದನು. ಅವರು ಮಾಡಬೇಕಾದ ಎಲ್ಲ ಕೆಲಸವನ್ನು ಯೋಸೇಫನೇ ಮಾಡಿಸುತ್ತಿದ್ದನು.

ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.

ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.

ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.

ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.

‹ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.›

‹ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.›

‹ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.›

ಕೊರ್ನೇಲ್ಯನು ತನ್ನ ಸಂಗಡ ಮಾತನಾಡಿದ ದೇವದೂತನು ಹೊರಟುಹೋದ ಮೇಲೆ, ತನ್ನ ಮನೆಯಲ್ಲಿದ್ದ ಸೇವಕರಲ್ಲಿ ಇಬ್ಬರನ್ನೂ ಮತ್ತು ತನ್ನ ಹತ್ತಿರ ಯಾವಾಗಲೂ ಇರುತ್ತಿದ್ದ ಸಿಪಾಯಿಗಳಲ್ಲಿ ಒಬ್ಬ ದೈವಭಕ್ತನನ್ನೂ ಕರೆದು,

ಯಾವ ಸಿಪಾಯಿಯಾದರೂ ಸ್ವಂತ ಖರ್ಚಿನಿಂದ ಸೇವೆ ಮಾಡುವುದುಂಟೋ? ದ್ರಾಕ್ಷಾತೋಟವನ್ನು ಮಾಡಿದವನು ಅದರ ಫಲವನ್ನು ತಿನ್ನದೇ ಇರುವುದುಂಟೋ? ತನ್ನ ಹಿಂಡನ್ನು ಸಾಕುವವನು ಅವುಗಳ ಹಾಲನ್ನು ಕುಡಿಯದೆ ಜೀವಿಸುವುದುಂಟೋ?

ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.

¶ ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.