ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.
TSK
TSK · ಙ್ಞಾನೋಕ್ತಿಗಳು 27:8
Treasury of Scripture Knowledge references in ಕನ್ನಡ IRV.
ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು, ಇದನ್ನು ಬಿಟ್ಟು ಯೆಹೂದ ದೇಶಕ್ಕೆ ಹೋಗು” ಎಂದು ಹೇಳಿದ್ದರಿಂದ ಅವನು ಹೆರೆತ್ ಅರಣ್ಯಕ್ಕೆ ಹೋದನು.
ಫರೋಹನು ಅವನನ್ನು, “ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?” ಎಂದು ಕೇಳಿದನು. ಅದಕ್ಕೆ ಹದದನು, “ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಂಡನು.
ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.
ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಜನರು ಅಲೆಯುವ ಪಕ್ಷಿಗಳಂತೆಯೂ, ಗೂಡಿನಿಂದ ಚದುರಿರುವ ಮರಿಗಳಂತೆಯೂ ಆಗುವರು.
ನಾನು ಯೆಹೋವನ ಸನ್ನಿಧಿಯಿಂದ ಓಡಿಹೋಗುತ್ತಿದ್ದೇನೆ ಎಂದು ಅವನು ಅವರಿಗೆ ಸೂಚಿಸಿದನು. ಇದನ್ನು ಕೇಳಿ ಅವರು ಬಹಳವಾಗಿ ಹೆದರಿ “ಇದೇನು ನೀನು ಮಾಡಿದ್ದು?” ಎಂದು ಕೇಳಿದರು.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.