ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
TSK
TSK · ಙ್ಞಾನೋಕ್ತಿಗಳು 28:18
Treasury of Scripture Knowledge references in ಕನ್ನಡ IRV.
ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು, ಬೀಳಿಸಿ, ನಾಶಮಾಡಿಬಿಡುತ್ತೀ.
ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.
ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.
ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.
“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.
‹ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ›‹ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.›