TSK

TSK · ಙ್ಞಾನೋಕ್ತಿಗಳು 29:25

Treasury of Scripture Knowledge references in ಕನ್ನಡ IRV.

Back to passage

ಐಗುಪ್ತ ದೇಶದವರು ನಿನ್ನನ್ನು ಕಂಡು, ಈಕೆಯು ಇವನ ಹೆಂಡತಿ ಎಂದು ತಿಳಿದು ನನ್ನನ್ನು ಕೊಂದು ನಿನ್ನನ್ನು ಉಳಿಸಬಹುದು.

¶ ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.

ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?

ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು” ಅಂದನು.

ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಬಾಗಿಲುಗಳನ್ನು ಕೆರೆಯುತ್ತಾ, ತನ್ನನ್ನು ಹುಚ್ಚನಂತೆ ನಟಿಸಿದನು.

ದಾವೀದನು ತನ್ನ ಕೃತ್ಯವನ್ನು ಜನರು ಹೇಳಾರೆಂದು ನೆನಸಿ, ಅವನು ಯಾರನ್ನೂ ಗತ್ ಊರಿಗೆ ತಾರದೆ, ಎಲ್ಲಾ ಸ್ತ್ರೀಪುರುಷರನ್ನು ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.

ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.

ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.

ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.

ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.

ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.

ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.

¶ ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.

¶ ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.

¶ ‹“ನನ್ನ ಸ್ನೇಹಿತರಾದ ನಿಮಗೆ ಹೇಳುತ್ತೇನೆ, ದೇಹವನ್ನು ಕೊಲ್ಲುವವರಿಗೆ ಭಯಪಡಬೇಡಿ. ಕೊಂದು ಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.›

ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.

ಈ ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಈ ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.

ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.