¶ ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.
TSK
TSK · ಙ್ಞಾನೋಕ್ತಿಗಳು 3:21
Treasury of Scripture Knowledge references in ಕನ್ನಡ IRV.
ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,
ಜ್ಞಾನವನ್ನು ಬಿಡದಿದ್ದರೆ ಅದು ನಿನ್ನನ್ನು ಕಾಪಾಡುವುದು, ಪ್ರೀತಿಸಿದರೆ, ಅದು ನಿನ್ನನ್ನು ಕಾಯುವುದು.
ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
‹ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.›
ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.