ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
TSK
TSK · ಕೀರ್ತನೆಗಳು 68:21
Treasury of Scripture Knowledge references in ಕನ್ನಡ IRV.
ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.
ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.”
ನಿನ್ನ ಅಭಿಷಿಕ್ತನಿಗಾಗಿಯೂ ಮತ್ತು ನಿನ್ನ ಪ್ರಜೆಯ ರಕ್ಷಣೆಗಾಗಿಯೂ ನೀನು ಯಾವಾಗಲೂ ಮುಂದಾಗಿರುತ್ತಿ; ದುಷ್ಟರ ಮನೆಯ ಮುಖ್ಯಸ್ಥರನ್ನು ಸದೆಬಡೆದು ಅವರ ಕುಟುಂಬಗಳನ್ನು ಬುಡಸಮೇತವಾಗಿ ಜನರ ಮುಂದೆ ಬೆತ್ತಲೆಯಾಗಿ ಮಾಡುವಿ. ಸೆಲಾ.
‹ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ”› ಎಂದು ಹೇಳಿದನು.
ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?