TSK

TSK · ಪ್ರಕಟನೆ 9:21

Treasury of Scripture Knowledge references in ಕನ್ನಡ IRV.

Back to passage

ನೀನು ಬಾಲ್ಯಾರಭ್ಯ ಪ್ರಯಾಸಪಟ್ಟು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ, ಲೆಕ್ಕವಿಲ್ಲದ ನಿನ್ನ ಮಾಟಮಂತ್ರಗಳನ್ನೂ ಪ್ರಯೋಗಿಸಿ ಎದ್ದು ನಿಲ್ಲು. ಇದರಿಂದ ಒಂದು ವೇಳೆ ನಿನಗೆ ಪ್ರಯೋಜನವಾದೀತು. ಒಂದು ವೇಳೆ ನಿನ್ನ ಶತ್ರುವಿನಲ್ಲಿ ಭಯ ಹುಟ್ಟೀತು.

ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ,

“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.

¶ ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.

ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,

¶ ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.

ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.

ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.

ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,

‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.