TSK

TSK · ರೋಮಾಪುರದವರಿಗೆ 1:10

Treasury of Scripture Knowledge references in ಕನ್ನಡ IRV.

Back to passage

“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,

ಅವನು ಒಪ್ಪದೆ ಇದ್ದುದರಿಂದ; “ಕರ್ತನ ಚಿತ್ತದಂತೆ ಆಗಲಿ” ಎಂದು ಹೇಳಿ ನಾವು ಸುಮ್ಮನಾದೆವು.

¶ ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು.

ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.

ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.

¶ ಇದಲ್ಲದೆ ದೇವರು ನಿಮ್ಮ ಪ್ರಾರ್ಥನೆಗಳನ್ನು ಕೇಳಿ ನಾನು ನಿಮ್ಮ ಬಳಿಗೆ ಬರುವುದಕ್ಕೆ ಕೃಪೆ ಮಾಡುವನೆಂಬ ನಿರೀಕ್ಷೆ ನನಗುಂಟು. ಆದಕಾರಣ ನಾನು ಉಳಿದುಕೊಳ್ಳಲು ಒಂದು ಕೊಠಡಿಯನ್ನು ಸಿದ್ಧಪಡಿಸು.

ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.