TSK

TSK · ರೋಮಾಪುರದವರಿಗೆ 16:4

Treasury of Scripture Knowledge references in ಕನ್ನಡ IRV.

Back to passage

ಅವರನ್ನು ತನ್ನ ಬಳಿಗೆ ತಂದನಂತರ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ “ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ” ಎಂದು ಹೇಳಿದನು. ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.

ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.

ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.

ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.

¶ ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.

ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

¶ ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ