TSK

TSK · ರೋಮಾಪುರದವರಿಗೆ 2:21

Treasury of Scripture Knowledge references in ಕನ್ನಡ IRV.

Back to passage

ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?

ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.

ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

‹ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.›

ಆತನು, ‹“ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.›

‹ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?›

ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.