TSK

TSK · ರೋಮಾಪುರದವರಿಗೆ 2:29

Treasury of Scripture Knowledge references in ಕನ್ನಡ IRV.

Back to passage

ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.

ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.

ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.

ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?

ಆದರೆ ಕರ್ತನು ಅವನಿಗೆ, ‹“ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.›

ಅದಕ್ಕೆ ಯೇಸು ‹“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.›

‹ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?›

ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.

ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತರೂಪವಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತ ರೂಪವಾದ ಒಡಂಬಡಿಕೆಯು ಮರಣವನ್ನುಂಟು ಮಾಡುತ್ತದೆ. ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.

ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.

ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.