TSK

TSK · ರೋಮಾಪುರದವರಿಗೆ 6:21

Treasury of Scripture Knowledge references in ಕನ್ನಡ IRV.

Back to passage

ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರ ಸಾಕ್ಷಿಗಳು ಬೇಕು.

ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.

¶ “ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.

ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.

ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.

“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.

ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.

ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.

ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು.

ತಿರುಗಿಸಲ್ಪಟ್ಟ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳಿವಳಿಕೆಯನ್ನು ಹೊಂದಿದ ಮೇಲೆಯೇ ತೊಡೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’”

ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.

ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ಆಲಯದ ರೂಪವನ್ನೂ, ವ್ಯವಸ್ಥೆಯನ್ನೂ ಅದರ ಆಗಮನ ಮತ್ತು ನಿರ್ಗಮನಗಳನ್ನೂ ಮತ್ತು ಅದರ ಎಲ್ಲಾ ಕಟ್ಟಳೆಗಳನ್ನೂ, ಸಕಲ ರಚನಾವಿಧಾನಗಳನ್ನೂ, ಸಮಸ್ತ ವಿಧಿಗಳನ್ನೂ, ಸರ್ವ ನಿರ್ಮಾಣ ರೀತಿಗಳನ್ನೂ ಅವರಿಗೆ ತಿಳಿಸು. ಅವರು ಅದರ ಪೂರ್ಣಕ್ರಮವನ್ನೂ, ಎಲ್ಲಾ ವಿಧಿಗಳನ್ನೂ ಅನುಸರಿಸಿ ಕೈಕೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.

ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.

ನಾವು ಶರೀರಾಧೀನ ಸ್ವಭಾವವನ್ನು ಅನುಸರಿಸುತ್ತಿದ್ದಾಗ ಧರ್ಮಶಾಸ್ತ್ರದಿಂದಲೇ ಪ್ರೇರಿತವಾದ ಪಾಪಾದಾಶೆಗಳು ನಮ್ಮ ಅಂಗಗಳಲ್ಲಿ ಸಕ್ರಿಯವಾಗಿ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.

ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.

ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.

ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.

¶ ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?

ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.