ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.
TSK
TSK · ಜೆಕರ್ಯ 14:21
Treasury of Scripture Knowledge references in ಕನ್ನಡ IRV.
ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.
ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.
¶ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
¶ ಅವರು ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುತ್ತಿದ್ದವರನ್ನೂ, ಕೊಳ್ಳುತ್ತಿದ್ದವರನ್ನೂ ಹೊರಡಿಸಿಬಿಡುವುದಕ್ಕೆ ತೊಡಗಿದನು; ನಾಣ್ಯಗಳನ್ನು ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿಹಾಕಿದನು; ಪಾರಿವಾಳಗಳನ್ನು ಮಾರುವವರ ಮಣೆಗಳನ್ನು ಉರುಳಿಸಿದನು;
ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
¶ “ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,
‹ಆದರೆ ನಾಯಿಗಳಂತಿರುವವರೂ, ಮಾಟಗಾರರೂ, ಜಾರರೂ, ಕೊಲೆಗಾರರೂ, ವಿಗ್ರಹಾರಾಧಕರೂ, ಸುಳ್ಳನ್ನು ಪ್ರೀತಿಸಿ ಅದನ್ನು ಅಭ್ಯಾಸಮಾಡುವವರೆಲ್ಲರೂ›‹ಹೊರಗಿರುವರು”› ಎಂದು ಹೇಳಿದನು.