TSK

TSK · ದಾನಿಯೇಲನು 7:21

Treasury of Scripture Knowledge references in Kannada KJV.

Back to passage

ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.

ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.

ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.

ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.