TSK

TSK · ಮಾರ್ಕನು 13:9

Treasury of Scripture Knowledge references in Kannada KJV.

Back to passage

ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.

ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.

ಯಾರಾದರೂ ನಿಮ್ಮನ್ನು ಅಂಗೀಕರಿಸದೆಯೂ ಇಲ್ಲವೆ ನಿಮ್ಮ ಮಾತನ್ನು ಕೇಳ ದೆಯೂ ಇದ್ದರೆ ನೀವು ಅಲ್ಲಿಂದ ಹೊರಡುವಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಢಿಸಿಬಿಡಿರಿ. ಮತ್ತು ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನ್ಯಾಯತೀರ್ಪಿನ ದಿನದಲ್ಲಿ ಆ ಪಟ

ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.

ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.

ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;

ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.

ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ

ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.

ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.

ಅವರು ಅವನನ್ನು ಕೊಲ್ಲಬೇಕೆಂ ದಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಭೆ ಆಯಿತೆಂದು ಪಟಾಲಮಿನ ಮುಖ್ಯ ನಾಯಕನಿಗೆ ವರದಿ ಬಂತು.

ಆಗ ಪೌಲನು ಆಲೋಚನಾ ಸಭೆಯನ್ನು ದೃಷ್ಟಿಸಿ ನೋಡುತ್ತಾ--ಜನರೇ, ಸಹೋ ದರರೇ, ನಾನು ಈ ದಿನದ ವರೆಗೆ ದೇವರ ಮುಂದೆ ಒಳ್ಳೇಮನಸ್ಸಾಕ್ಷಿಯಿಂದ ಜೀವಿಸಿದ್ದೇನೆ ಎಂದು ಹೇಳಿದನು.

ಫೆಸ್ತನು ಆ ಪ್ರಾಂತ್ಯಕ್ಕೆ ಬಂದು ಮೂರು ದಿವಸಗಳಾದ ಮೇಲೆ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.

ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.

ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.