ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
TSK
TSK · ಮಾರ್ಕನು 7:21
Treasury of Scripture Knowledge references in Kannada KJV.
ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ.
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
ಹೀಗೆ ಶರೀರದಲ್ಲಿ ಇನ್ನು ಉಳಿದಿರುವ ತನ್ನ ಜೀವಿತಕಾಲದಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವನು.