TSK

TSK · ಅರಣ್ಯಕಾಂಡ 21:28

Treasury of Scripture Knowledge references in Kannada KJV.

Back to passage

ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.

ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್‌ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.

ಮುಳ್ಳಿನ ಗಿಡವು ಮರಗಳಿಗೆ--ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವದು ಸತ್ಯ ವಾದರೆ ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು ಲೆಬನೋನಿನ ದೇವದಾರುಗಳನ್ನು ದಹಿಸಿಬಿಡಲಿ ಅಂದಿತು.

ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.

ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.

ಆದರೆ ನಾನು ಗಾಜದ ಗೋಡೆಯಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಅವರ ಅರಮನೆಗಳನ್ನು ನುಂಗಿಬಿಡುವದು.

ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.

ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡು ವದು. ಮೋವಾಬು ಆರ್ಭಟದ ಸಂಗಡವೂ ತುತೂ ರಿಯ ಧ್ವನಿಯ ಸಂಗಡವೂ ಗಲಿಬಿಲಿಯಲ್ಲಿ ಸಾಯು ವದು.