ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು.
TSK
TSK · ಅರಣ್ಯಕಾಂಡ 21:7
Treasury of Scripture Knowledge references in Kannada KJV.
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ--ನೀವು ಕರ್ತನನ್ನು ಬೇಡಿಕೊಂಡು ಈ ಕಪ್ಪೆ ಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿ ಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಕರ್ತನಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು ಅಂದನು.
ಆಗ ಫರೋಹನು ಮೋಶೆ ಆರೋನರನ್ನು ಕರೇ ಕಳುಹಿಸಿ ಅವರಿಗೆ--ಈ ಸಾರಿ ನಾನು ಪಾಪಮಾಡಿ ದ್ದೇನೆ. ಕರ್ತನು ನೀತಿವಂತನು, ನಾನೂ ನನ್ನ ಜನರೂ ದುಷ್ಟರಾಗಿದ್ದೇವೆ.
ಹೀಗಿರುವದರಿಂದ ಈಗ ಈ ಒಂದೇ ಸಾರಿ ನನ್ನ ಪಾಪವನ್ನು ಕ್ಷಮಿಸಬೇಕೆಂದು ನಾನು ನಿಮ್ಮನ್ನು ಬೇಡುತ್ತೇನೆ. ಈ ಮರಣವನ್ನು ಮಾತ್ರ ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಕರ್ತನನ್ನು ಬೇಡಿ ಕೊಳ್ಳಿರಿ ಅಂದನು.
ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು.
ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.
ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.
ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ ಪ್ರವಾದಿಯಾದ ಯೆರೆವಿಾಯನ ಬಳಿಗೆ ಕಳುಹಿಸಿ--ನಮ್ಮ ದೇವರಾದ ಕರ್ತನಿಗೆ ನಮಗೋಸ್ಕರ ಪ್ರಾರ್ಥನೆ ಮಾಡೆಂದು ಹೇಳಿಸಿದನು.
ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು.
ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;