TSK

TSK · ಙ್ಞಾನೋಕ್ತಿಗಳು 1:24

Treasury of Scripture Knowledge references in Kannada KJV.

Back to passage

ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.

ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.

ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.

ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.