TSK

TSK · ಙ್ಞಾನೋಕ್ತಿಗಳು 18:24

Treasury of Scripture Knowledge references in Kannada KJV.

Back to passage

ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.

ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು.

ದಾವೀದನು--ಸೌಲನ ಮನೆಯವರಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ ಎಂದು ಕೇಳಿದನು.

ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.

ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.

ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲ್ಯರ ಮೇಲೆ ಅರಸನಾಗ ಮಾಡಲು ಪೂರ್ಣಹೃದಯದಿಂದ ಹೆಬ್ರೋನಿಗೆ ಬಂದರು. ಇದಲ್ಲದೆ ಇಸ್ರಾಯೇಲಿ ನಲ್ಲಿದ್ದ ಮಿಕ್ಕಾದವರೆಲ್ಲರೂ ದಾವೀದನನ್ನು ಅರಸ ನಾಗ ಮಾಡಲು ಒಂದೇ ಹೃದಯವುಳ್ಳವರಾಗಿದ್ದರು.

ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.

ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು.