TSK

TSK · ಙ್ಞಾನೋಕ್ತಿಗಳು 21:3

Treasury of Scripture Knowledge references in Kannada KJV.

Back to passage

ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.

ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.

ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.

ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.

ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.

ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.