TSK

TSK · ಙ್ಞಾನೋಕ್ತಿಗಳು 22:12

Treasury of Scripture Knowledge references in Kannada KJV.

Back to passage

ಆಗ ದೇವರ ಮನು ಷ್ಯನು ಇಸ್ರಾಯೇಲಿನ ಅರಸನಿಗೆ--ಅಂಥಾ ಸ್ಥಳವನ್ನು ಹಾದು ಹೋಗದೆ ಜಾಗ್ರತೆಯಾಗಿ ಇರು; ಯಾಕಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆಂದು ಹೇಳಿ ಕಳುಹಿಸಿದನು.

ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆ ಮಾಡಿ ಅವರ ನಿಮಿತ್ತ ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲನ್ನು ಇಟ್ಟೆವು.

ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.

ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.

ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.