ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
TSK
TSK · ಙ್ಞಾನೋಕ್ತಿಗಳು 25:8
Treasury of Scripture Knowledge references in Kannada KJV.
ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು.
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?