TSK

TSK · ಙ್ಞಾನೋಕ್ತಿಗಳು 3:11

Treasury of Scripture Knowledge references in Kannada KJV.

Back to passage

ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.

ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.

ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.

ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.

ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;