ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
TSK
TSK · ಙ್ಞಾನೋಕ್ತಿಗಳು 31:9
Treasury of Scripture Knowledge references in Kannada KJV.
ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.
ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು.
ಓ ದೇವರೇ, ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು.
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ